ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಖಂಡಿಸಿ ಪ್ರತಿಭಟನೆ. ಎಬಿವಿಪಿ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ. ಚನ್ನಮ್ಮ ಸರ್ಕಲ್ನಲ್ಲಿ ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ.
ಬಾಡಿಗೆದಾರರಿಗೆ ಗೃಹಜ್ಯೋತಿಯಿಂದ ಉಳಿತಾಯದ ಖುಷಿ. ಆ ಖುಷಿಯನ್ನೇ ಕಿತ್ತುಕೊಂಡು ಮನೆಯ ಮಾಲೀಕರು..!ಬಾಡಿಗೆ ಹೆಚ್ಚಿಸಿ ಗೃಹಜ್ಯೋತಿ ಉಳಿತಾಯ ಕಸಿದ ಮಾಲೀಕರು. ಮನೆ ಮಾಲೀಕರು ಬಾಡಿಗೆ ಹೆಚ್ಚಿಸುವ ಮೂಲಕ ಶಾಕ್..!
ವಿಶ್ವ ದಾಖಲೆ ಬರೆದ ನಾಲ್ಕೇ ತಿಂಗಳ ಪುಟ್ಟ ಕಂದಮ್ಮ ಇಶಾನ್ವಿ . 125 ವಿವಿಧ ರೀತಿಯ ವಸ್ತು,ಪ್ರಾಣಿ-ಪಕ್ಷಿ ಗುರುತಿಸುವ ಸಾಮರ್ಥ್ಯ. ತರಕಾರಿಗಳ ಚಿತ್ರ ಫ್ಲಾಶ್ ಕಾರ್ಡ್ಗಳಲ್ಲಿ ಗುರುತಿಸುವ ಸಾಮರ್ಥ್ಯ. ಪುಟ್ಟ ಕಂದನ ಹೆಸರು ನೋಬಲ್ ಬುಕ್ ಆಫ್ ರೆಕಾರ್ಡ್ನಲ್ಲಿ ಸೇರ್ಪಡೆ.
ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್ ಜಿಹಾದ್ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು.
ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.